ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.