ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
Cross references
ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.