ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
Cross references
ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.