ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
Cross references
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.
ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ.
ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.