ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
Cross references
ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ