ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
Cross references
ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.