ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
Cross references
ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.