ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
Cross references
ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.
ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.