ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
Cross references
ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.