ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
Cross references
ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು.
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.
ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.