ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
Cross references
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.
ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.
ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.