Home Bibles ಹೆಬ್ರಿಯರಿಗೆ 6:2 · ಕನ್ನಡ ಬೈಬಲ್
ಹೆಬ್ರಿಯರಿಗೆ 6:2 · ಕನ್ನಡ ಬೈಬಲ್

ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.

Cross references

ಸಭಾಪ್ರಸಂಗಿ 12:14

ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.

ಯೆಶಾಯ 26:19

ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.

ಯೆಹೆಜ್ಕೇಲ 37:1

ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.

ದಾನಿಯೇಲ 12:2

ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

ಮತ್ತಾಯ 3:14

ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.

ಮತ್ತಾಯ 20:22

ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ

ಮತ್ತಾಯ 22:23

ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--

ಮತ್ತಾಯ 25:31

ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

ಮತ್ತಾಯ 28:19

ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಮಾರ್ಕ 7:4

ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.

ಮಾರ್ಕ 7:8

ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.

ಮಾರ್ಕ 16:16

ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

ಲೂಕ 3:16

ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು

ಲೂಕ 11:38

ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.

ಲೂಕ 12:50

ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!

ಲೂಕ 14:14

ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.

ಯೋಹಾನ 1:33

ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.

ಯೋಹಾನ 3:25

ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.

ಯೋಹಾನ 4:1

ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.

ಯೋಹಾನ 5:29

ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.

ಯೋಹಾನ 11:24

ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.

ಅಪೋಸ್ತಲರ ಕೃತ್ಯಗಳು 2:38

ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಅಪೋಸ್ತಲರ ಕೃತ್ಯಗಳು 2:41

ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.

ಅಪೋಸ್ತಲರ ಕೃತ್ಯಗಳು 4:2

ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.

ಅಪೋಸ್ತಲರ ಕೃತ್ಯಗಳು 6:6

ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.

ಅಪೋಸ್ತಲರ ಕೃತ್ಯಗಳು 8:12

ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.

ಅಪೋಸ್ತಲರ ಕೃತ್ಯಗಳು 8:36

ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.

ಅಪೋಸ್ತಲರ ಕೃತ್ಯಗಳು 10:47

ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.

ಅಪೋಸ್ತಲರ ಕೃತ್ಯಗಳು 13:3

ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.

ಅಪೋಸ್ತಲರ ಕೃತ್ಯಗಳು 16:15

ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.

ಅಪೋಸ್ತಲರ ಕೃತ್ಯಗಳು 16:33

ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.

ಅಪೋಸ್ತಲರ ಕೃತ್ಯಗಳು 17:18

ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

ಅಪೋಸ್ತಲರ ಕೃತ್ಯಗಳು 17:31

ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

ಅಪೋಸ್ತಲರ ಕೃತ್ಯಗಳು 19:2

ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.

ಅಪೋಸ್ತಲರ ಕೃತ್ಯಗಳು 23:6

ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ

ಅಪೋಸ್ತಲರ ಕೃತ್ಯಗಳು 24:15

ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.

ಅಪೋಸ್ತಲರ ಕೃತ್ಯಗಳು 24:21

ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.

ಅಪೋಸ್ತಲರ ಕೃತ್ಯಗಳು 24:25

ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.

ಅಪೋಸ್ತಲರ ಕೃತ್ಯಗಳು 26:8

ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?

ರೋಮಾಪುರದವರಿಗೆ 2:5

ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

Interlinear

Choose Theme