ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
Cross references
ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.
ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.