ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
Cross references
ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.