ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
Cross references
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
ಕರ್ತನು ಮೋಶೆಗೆ--ನೀನು ಈ ವಾಕ್ಯಗಳನ್ನು ಬರೆ; ಈ ವಾಕ್ಯಗಳ ಪ್ರಕಾರವೇ ನಿನ್ನ ಸಂಗಡಲೂ ಇಸ್ರಾಯೇಲಿನ ಸಂಗಡಲೂ ನಾನು ಒಡಂಬಡಿಕೆಯನ್ನು ಮಾಡಿದ್ದೇನೆ ಅಂದನು.
ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.