ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
Cross references
ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.