ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
Cross references
ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.