ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
Cross references
ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ