ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
Cross references
ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.
ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.
ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.