ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
Cross references
ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ.
ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು