ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
Cross references
ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ--
ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.