Home Bibles ಹೆಬ್ರಿಯರಿಗೆ 9:9 · ಕನ್ನಡ ಬೈಬಲ್
ಹೆಬ್ರಿಯರಿಗೆ 9:9 · ಕನ್ನಡ ಬೈಬಲ್

ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.

Cross references

ಕೀರ್ತನೆಗಳು 40:6

ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;

ಕೀರ್ತನೆಗಳು 51:16

ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.

ರೋಮಾಪುರದವರಿಗೆ 5:14

ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.

ಗಲಾತ್ಯದವರಿಗೆ 3:21

ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.

ಹೆಬ್ರಿಯರಿಗೆ 5:1

ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.

ಹೆಬ್ರಿಯರಿಗೆ 7:11

ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).

ಹೆಬ್ರಿಯರಿಗೆ 7:18

ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.

ಹೆಬ್ರಿಯರಿಗೆ 9:13

ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ

ಹೆಬ್ರಿಯರಿಗೆ 9:24

ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.

ಹೆಬ್ರಿಯರಿಗೆ 10:1

ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

ಹೆಬ್ರಿಯರಿಗೆ 10:11

ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.

ಹೆಬ್ರಿಯರಿಗೆ 11:19

ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.

ಹೆಬ್ರಿಯರಿಗೆ 11:39

ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.

1 ಪೇತ್ರ 1:11

ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.

1 ಪೇತ್ರ 3:21

ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.

Interlinear

Choose Theme