ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
Cross references
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು.
ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ