ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
Cross references
ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ.
ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.