ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
Cross references
ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು.
ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.
ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.