ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
Cross references
ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ.
ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.