Home Bibles ಹೊಶೇಯ 11:5 · ಕನ್ನಡ ಬೈಬಲ್
ಹೊಶೇಯ 11:5 · ಕನ್ನಡ ಬೈಬಲ್

ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.

Cross references

2 ಅರಸುಗಳು 15:19

ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.

2 ಅರಸುಗಳು 15:29

ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.

2 ಅರಸುಗಳು 17:3

ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.

2 ಅರಸುಗಳು 17:13

ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.

2 ಅರಸುಗಳು 18:11

ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್‌ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

ಯೆಶಾಯ 8:6

ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ

ಯೆರೆಮಿಯ 8:4

ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.

ಯೆರೆಮಿಯ 8:5

ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6

ಹೊಶೇಯ 5:13

ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.

ಹೊಶೇಯ 6:1

ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.

ಹೊಶೇಯ 7:16

ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.

ಹೊಶೇಯ 8:13

ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.

ಹೊಶೇಯ 9:3

ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.

ಹೊಶೇಯ 9:6

ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್‌ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.

ಹೊಶೇಯ 10:6

ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್‌ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.

ಆಮೋಸ 4:6

ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.

ಆಮೋಸ 4:8

ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಆಮೋಸ 4:9

ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಆಮೋಸ 4:10

ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಆಮೋಸ 4:11

ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಆಮೋಸ 5:27

ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.

ಜೆಕರ್ಯ 1:4

ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.

Interlinear

Choose Theme