ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.
Cross references
ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?
ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು.
ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.