ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
Cross references
ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--