ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
Cross references
ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ.
ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.