ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
Cross references
ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.