ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
Cross references
ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು,
ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.
ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;
ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.