ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
Cross references
ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ.
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.
ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.