Home Bibles ಹೊಶೇಯ 13:2 · ಕನ್ನಡ ಬೈಬಲ್
ಹೊಶೇಯ 13:2 · ಕನ್ನಡ ಬೈಬಲ್

ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.

Cross references

ಅಂಕೆಗಳ ಪುಸ್ತಕ 32:14

ಇಗೋ, ಕರ್ತನ ಕೋಪವು ಇಸ್ರಾಯೇಲ್‌ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.

1 ಸಮುವೇಲ 10:1

ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?

1 ಅರಸುಗಳು 19:18

ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.

2 ದಿನವೃತ್ತಾಂತ 28:13

ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.

2 ದಿನವೃತ್ತಾಂತ 33:23

ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.

ಕೀರ್ತನೆಗಳು 2:12

ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.

ಕೀರ್ತನೆಗಳು 115:4

ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.

ಕೀರ್ತನೆಗಳು 135:17

ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ.

ಯೆಶಾಯ 1:5

ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಯೆಶಾಯ 30:1

ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಯೆಶಾಯ 44:11

ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.

ಯೆಶಾಯ 44:17

ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.

ಯೆಶಾಯ 45:20

ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.

ಯೆಶಾಯ 46:6

ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.

ಯೆಶಾಯ 46:8

ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;

ಯೆರೆಮಿಯ 8:5

ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6

ಯೆರೆಮಿಯ 10:4

ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.

ಯೆರೆಮಿಯ 10:8

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.

ಹೊಶೇಯ 2:8

ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.

ಹೊಶೇಯ 8:4

ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.

ಹೊಶೇಯ 8:6

ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.

ಹೊಶೇಯ 10:1

ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.

ಹೊಶೇಯ 11:2

ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್‌ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.

ಹೊಶೇಯ 11:6

ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.

ಹಬಕ್ಕೂಕ 2:18

ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?

ರೋಮಾಪುರದವರಿಗೆ 1:22

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

ರೋಮಾಪುರದವರಿಗೆ 2:5

ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

ರೋಮಾಪುರದವರಿಗೆ 11:4

ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.

2 ತಿಮೋಥೆಯ 3:13

ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

Interlinear

Choose Theme