ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ
ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು.
ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ