Home Bibles ಹೊಶೇಯ 14:4 · ಕನ್ನಡ ಬೈಬಲ್
ಹೊಶೇಯ 14:4 · ಕನ್ನಡ ಬೈಬಲ್

ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.

Cross references

ನಿರ್ಗಮಕಾಂಡ 15:26

ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.

ಅಂಕೆಗಳ ಪುಸ್ತಕ 25:4

ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.

ಅಂಕೆಗಳ ಪುಸ್ತಕ 25:11

ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.

ದ್ವಿತೀಯೋಪದೇಶಕಾಂಡ 7:7

ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.

ಕೀರ್ತನೆಗಳು 10:14

ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.

ಕೀರ್ತನೆಗಳು 20:8

ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.

ಕೀರ್ತನೆಗಳು 78:38

ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.

ಯೆಶಾಯ 12:1

ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.

ಯೆಶಾಯ 57:18

ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.

ಯೆರೆಮಿಯ 3:22

ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.

ಯೆರೆಮಿಯ 5:6

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.

ಯೆರೆಮಿಯ 8:22

ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.

ಯೆರೆಮಿಯ 14:7

ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ

ಯೆರೆಮಿಯ 17:14

ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?

ಯೆರೆಮಿಯ 33:6

ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.

ಹೊಶೇಯ 2:19

ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು.

ಹೊಶೇಯ 6:1

ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.

ಹೊಶೇಯ 11:7

ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.

ಸೆಫನ್ಯ 3:17

ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.

ಮತ್ತಾಯ 9:12

ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.

ರೋಮಾಪುರದವರಿಗೆ 3:24

ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.

2 ಕೊರಿಂಥದವರಿಗೆ 5:19

ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.

ಎಫೆಸದವರಿಗೆ 1:6

ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.

ಎಫೆಸದವರಿಗೆ 2:4

ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ

2 ತಿಮೋಥೆಯ 1:9

ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.

ತೀತ 3:4

ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ

Interlinear

Choose Theme