ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
Cross references
ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ?
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.