ನೀವು ನಿಮ್ಮ ಸಹೋದರರಿಗೆ ಅಮ್ಮಿ ಎಂದೂ ನಿಮ್ಮ ಸಹೋದರಿಯರಿಗೆ ರುಹಾಮ ಎಂದೂ ಹೇಳಿರಿ.
Cross references
ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.