ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
Cross references
ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.
ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.
ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.
ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.