ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
Cross references
ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.
ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.