ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು.
Cross references
ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.