ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.