ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
Cross references
ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.
ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.
ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು.
ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.