Cross references
ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.