ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
Cross references
ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.
ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.