ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
Cross references
ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.
ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ.
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?