ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ.
Cross references
ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.
ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು.
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.
ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.
ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.
ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.