ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
Cross references
ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.