ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
Cross references
ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ.
ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;