ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
Cross references
ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ.
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)
ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ.
ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.